Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:15 - ಕನ್ನಡ ಸಮಕಾಲಿಕ ಅನುವಾದ

15 ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಐಗುಪ್ತದೇಶದಲ್ಲಿಯೂ ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು - ನಮ್ಮ ಹಣವು ಮುಗಿದು ಹೋಯಿತು; ನೀನು [ಧರ್ಮವಾಗಿಯೇ] ಆಹಾರಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:15
11 ತಿಳಿವುಗಳ ಹೋಲಿಕೆ  

ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.


ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು.


ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.


ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.


ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.


ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.


ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು.


ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು