Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:19 - ಕನ್ನಡ ಸಮಕಾಲಿಕ ಅನುವಾದ

19 ನಾವೂ, ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವುದು ಏಕೆ? ನಮ್ಮನ್ನೂ, ನಮ್ಮ ಭೂಮಿಯನ್ನೂ ಆಹಾರಕ್ಕಾಗಿ ಕೊಂಡುಕೋ. ಆಗ ನಾವೂ, ನಮ್ಮ ಭೂಮಿಯೂ ಫರೋಹನಿಗೆ ದಾಸರಾಗಿರುವೆವು. ನಮಗೆ ಬೀಜವನ್ನು ಕೊಡು, ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಕಣ್ಣೆದುರಿಗೆ ನಾವು ಯಾಕೆ ಸಾಯಬೇಕು; ನಮ್ಮ ಭೂವಿುಯು ಯಾಕೆ ಹಾಳಾಗಬೇಕು. ನಮ್ಮನ್ನೂ ನಮ್ಮ ಭೂವಿುಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂವಿುಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂವಿುಯು ಹಾಳು ಬೀಳಬಾರದಿದ್ದರೆ ನೀನು ಬೀಜವನ್ನು ಕೊಡಬೇಕೆಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:19
11 ತಿಳಿವುಗಳ ಹೋಲಿಕೆ  

ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.


ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.


ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.


ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.


ಆ ವರ್ಷವಾದ ಮೇಲೆ ಮಾರನೆಯ ವರ್ಷದಲ್ಲಿ, ಅವರು ಅವನ ಬಳಿಗೆ ಬಂದು ಅವನಿಗೆ, “ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವುದರಿಂದ, ನಮ್ಮ ಶರೀರಗಳೂ, ನಮ್ಮ ಭೂಮಿಯೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬುದನ್ನು ನಮ್ಮ ಒಡೆಯನಿಗೆ ಮರೆಮಾಡದೆ ತಿಳಿಸುತ್ತಿದ್ದೇವೆ.


ಆಗ ಯೋಸೇಫನು ಈಜಿಪ್ಟ್ ದೇಶವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಬರವು ಅವರಿಗೆ ಘೋರವಾಗಿದ್ದುದರಿಂದ ಈಜಿಪ್ಟನವರು ತಮ್ಮ ತಮ್ಮ ಹೊಲಗಳನ್ನು ಮಾರಿಬಿಟ್ಟರು. ಹೀಗೆ ದೇಶವು ಫರೋಹನದಾಯಿತು.


ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು