Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:6 - ಕನ್ನಡ ಸಮಕಾಲಿಕ ಅನುವಾದ

6 ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:6
24 ತಿಳಿವುಗಳ ಹೋಲಿಕೆ  

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.


ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.


ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.


ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.


ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು.


ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು.


ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು.


ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.


ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.


ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.


ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.


ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.


ಅದಕ್ಕೆ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.


ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.


ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು