Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:15
39 ತಿಳಿವುಗಳ ಹೋಲಿಕೆ  

ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.


ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.


ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.


ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.


ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.


ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.


ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,


ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.


ನಾನು ಇಷ್ಟಪಡುವ ರುಚಿಯಾದ ಊಟವನ್ನೂ ಸಿದ್ಧಮಾಡಿ ತೆಗೆದುಕೊಂಡು ಬಾ. ಆಗ ಸಾಯುವುದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುವಂತೆ ಅದನ್ನು ಊಟಮಾಡುವೆನು,” ಎಂದನು.


ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ತೊಟ್ಟಿಯಲ್ಲಿ ಹೊಯ್ದು, ತಿರುಗಿ ಸೇದುವುದಕ್ಕೆ ಬಾವಿಯ ಬಳಿಗೆ ಓಡಿ, ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ಸೇದಿದಳು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.


ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.


ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ.


“ಅವನು ನನಗೆ, ‘ನಾನು ಯಾರ ಮುಂದೆ ನಂಬಿಗಸ್ತಿಕೆಯಿಂದ ನಡೆದುಕೊಳ್ಳುತ್ತೇನೋ, ಆ ಯೆಹೋವ ದೇವರು ತಮ್ಮ ದೂತನನ್ನು ನಿನ್ನ ಸಂಗಡ ಕಳುಹಿಸಿ, ನೀನು ನನ್ನ ಬಂಧುಗಳಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ನಿನ್ನ ಪ್ರಯತ್ನವನ್ನು ಸಫಲಮಾಡುವರು.


ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ, ಅವನನ್ನು ಹೀಗೆ ಆಶೀರ್ವದಿಸಿದನು, “ನನ್ನ ಮಗನ ವಾಸನೆಯು ಯೆಹೋವ ದೇವರು ಆಶೀರ್ವದಿಸಿದ ಹೊಲದ ವಾಸನೆಯಂತೆ ಇದೆ.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.


“ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು