Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:17 - ಕನ್ನಡ ಸಮಕಾಲಿಕ ಅನುವಾದ

17 ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವದಕ್ಕಾಗಿ ಹಿಡಿದು ತಂದೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:17
13 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು.


ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.


ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.


ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.


ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,


ಯೋಸೇಫನು ತನ್ನ ತಂದೆಗೆ, “ಅಪ್ಪಾ, ಹಾಗಲ್ಲ, ಇವನೇ ಜೇಷ್ಠಪುತ್ರನು. ಇವನ ತಲೆಯ ಮೇಲೆ ಬಲಗೈ ಇಡು,” ಎಂದನು.


ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು