Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:18 - ಕನ್ನಡ ಸಮಕಾಲಿಕ ಅನುವಾದ

18 “ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:18
32 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.


ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಕಾದುಕೊಂಡಿದ್ದೇನೆ; ನಾನು ನಿಮ್ಮ ಆಜ್ಞೆಗಳನ್ನು ಹಿಂಬಾಲಿಸುತ್ತಿದ್ದೇನೆ.


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.


ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.


ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,


ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.


ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಮಗೆ ತೋರಿಸಿರಿ. ನಿಮ್ಮ ರಕ್ಷಣೆಯನ್ನು ನಮಗೆ ಕೊಡಿರಿ.


ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಅವರು ನನ್ನ ಕಡೆಗೆ ತಿರುಗಿ, ನನ್ನ ಮೊರೆಯನ್ನು ಕೇಳಿದರು.


ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ಇವನು ಅವರ ತೀರ್ಮಾನಕ್ಕೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ. ಇವನು ಯೆಹೂದ್ಯರ ಪಟ್ಟಣವಾದ ಅರಿಮಥಾಯದವನೂ ದೇವರ ರಾಜ್ಯಕ್ಕಾಗಿ ಎದುರುನೋಡುವವನೂ ಆಗಿದ್ದನು.


ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.


“ ‘ಹಾಗಾದರೆ, ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.


ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ದೊರಕಲಿ, ನಿಮ್ಮ ವಾಗ್ದಾನದ ರಕ್ಷಣೆಯು ನನಗೆ ಉಂಟಾಗಲಿ;


ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ. ನನ್ನ ನಿರೀಕ್ಷೆಯು ದೇವರಿಂದಲೇ.


ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು.


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು