Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರವಿುಯ ಭುಜಬಲದಿಂದಲೂ ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನ ಕಡೆಯಿಂದಲೂ ಅವನ ಬಿಲ್ಲು ಸ್ಥಿರವಾಗಿ ನಿಂತಿತು, ಅವನ ಕೈಗಳು ಚುರುಕಾಗಿ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:24
53 ತಿಳಿವುಗಳ ಹೋಲಿಕೆ  

ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು, ನನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡೆನು.”


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


ನನ್ನ ಘನವು ನನ್ನಲ್ಲಿ ಹೊಸದಾಗಿ ಇರುತ್ತದೆ; ನನ್ನ ಬಿಲ್ಲು ಸಹ ನನ್ನ ಕೈಯಲ್ಲಿ ಎಂದೆಂದಿಗೂ ಬಲಗೊಳ್ಳುತ್ತಾ ಇರುತ್ತದೆ,’ ಎಂದೆಲ್ಲಾ ಹೇಳುತ್ತಿದ್ದೆನು.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.


ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?


ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.


ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗೊಣಗುಟ್ಟುವವರು ಬೋಧನೆ ಕಲಿಯುವರು.”


ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.


ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ. ನೀವು ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಿರಿ.


ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.


ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.


ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.


ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.


ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.


ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.


ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.


ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.


ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.


ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


ಆದರೂ ನಾನು ನಿಮ್ಮ ಸಂಗಡ ಯಾವಾಗಲೂ ಇದ್ದೇನೆ. ನೀವು ನನ್ನ ಬಲಗೈಯನ್ನು ಹಿಡಿದಿದ್ದೀರಿ.


ಯೆಹೋವ ದೇವರೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.”


ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.


ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.


ಅವನು ಇಸ್ರಾಯೇಲಿನ ಅರಸನಿಗೆ, “ನಿನ್ನ ಕೈಯಲ್ಲಿ ಬಿಲ್ಲನ್ನು ತೆಗೆದುಕೋ,” ಅವನು ಅದನ್ನು ತೆಗೆದುಕೊಂಡಾಗ ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು