Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:6 - ಕನ್ನಡ ಸಮಕಾಲಿಕ ಅನುವಾದ

6 ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:6
29 ತಿಳಿವುಗಳ ಹೋಲಿಕೆ  

ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.


ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.


ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?


ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;


ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.


ಎಚ್ಚರವಾಗು, ನನ್ನ ಪ್ರಾಣವೇ, ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯಕಾಲವನ್ನು ಎಚ್ಚರಗೊಳಿಸುವೆನು.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;


ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ!


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.


ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.


ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,


ಕೀಷೋನ್ ನದಿಯು, ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ.


ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು