Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:9
11 ತಿಳಿವುಗಳ ಹೋಲಿಕೆ  

ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


“ ‘ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕಳೆದುಕೊಂಡೆನೆಂದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು, ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.


ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.


“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ: “ಗಾದನ ರಾಜ್ಯವನ್ನು ವಿಸ್ತಾರ ಮಾಡಿದ ದೇವರು ಸ್ತುತಿಹೊಂದಲಿ. ಅವನು ಸಿಂಹದಂತೆ ಜೀವಿಸಿ ತೋಳನ್ನೂ ಶಿರಸ್ಸನ್ನೂ ಮುರಿಯುವನು.


ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.


ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು