Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:24 - ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:24
34 ತಿಳಿವುಗಳ ಹೋಲಿಕೆ  

ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.


ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.


ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.


ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


‘ನನಗೆ ನನ್ನ ತಂದೆ, “ನಾನು ಸಾಯುತ್ತೇನೆ, ನಾನು ಕಾನಾನ್ ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಸಮಾಧಿಮಾಡಬೇಕು,” ಎಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.’ ಹೀಗಿರುವುದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಳಿ, ತಿರುಗಿ ಬರುವ ಹಾಗೆ ಅಪ್ಪಣೆಯಾಗಬೇಕು,” ಎಂದನು.


ಯೆಹೋವ ದೇವರು ಸಾರಳಿಗೆ ವಾಗ್ದಾನ ಮಾಡಿದಂತೆ ಆಕೆಗೆ ದಯೆತೋರಿಸಿದರು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು.


ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.


ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.


ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.


ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು