Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:3
17 ತಿಳಿವುಗಳ ಹೋಲಿಕೆ  

ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.


ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.


ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?


ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು