Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:13 - ಕನ್ನಡ ಸಮಕಾಲಿಕ ಅನುವಾದ

13 ಅದೇ ದಿನದಲ್ಲಿ ನೋಹನು ಮತ್ತು ಅವನ ಪುತ್ರರಾದ ಶೇಮ್, ಹಾಮ್, ಯೆಫೆತ್ ಇವರೂ ನೋಹನ ಹೆಂಡತಿಯೂ ಅವನ ಪುತ್ರರ ಹೆಂಡತಿಯರೂ ನಾವೆಯನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದೇ ದಿನ ನೋಹನೂ ಅವನ ಹೆಂಡತಿಯೂ ಮತ್ತು ಶೇಮ್, ಹಾಮ್, ಯೆಫೆತ್ ಎಂಬ ಅವನ ಮಕ್ಕಳೂ ಅವರ ಮಡದಿಯರೂ ನಾವೆಯನ್ನು ಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳೂ ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:13
16 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


ಆದರೆ ನಾನು ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀನು, ನಿನ್ನ ಸಂಗಡ ನಿನ್ನ ಮಕ್ಕಳು, ನಿನ್ನ ಹೆಂಡತಿ ಹಾಗೂ ಸೊಸೆಯರು ನಾವೆಯೊಳಗೆ ಸೇರಬೇಕು.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಯೆಫೆತನ ಹಿರಿಯ ಸಹೋದರನೂ ಏಬೆರನ ಮಕ್ಕಳ ಮೂಲಪುರುಷನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.


ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.


ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳಿದ್ದರು.


ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.


ಇದಲ್ಲದೆ ತಮ್ಮ ತಮ್ಮ ಜಾತಿಗನುಸಾರವಾಗಿ ಎಲ್ಲಾ ಕಾಡು ಮೃಗಗಳೂ ಎಲ್ಲಾ ಪಶುಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳೂ ಎಲ್ಲಾ ಪಕ್ಷಿಗಳೂ ಎಲ್ಲಾ ವಿಧವಾದ ರೆಕ್ಕೆಯಿರುವ ಜೀವಿಗಳೂ ಪ್ರವೇಶಿಸಿದವು.


ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.


ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು