Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:15 - ಕನ್ನಡ ಸಮಕಾಲಿಕ ಅನುವಾದ

15 ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮುಂದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಳಯ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಾನು ನಿಮ್ಮನ್ನೂ ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಪ್ರತಿಜ್ಞೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಪ್ರಾಣಿಗಳನ್ನು ಹಾಳುಮಾಡುವ ಪ್ರಳಯವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:15
14 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,


ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.”


ನಾನು ಭೂಮಿಯ ಮೇಲೆ ಮೇಘಗಳನ್ನು ಬರಮಾಡುವಾಗ, ಆ ಮಳೆಬಿಲ್ಲು ಮೇಘಗಳಲ್ಲಿ ಕಂಡುಬರುವುದು.


ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು