Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:26 - ಕನ್ನಡ ಸಮಕಾಲಿಕ ಅನುವಾದ

26 ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 "ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ"

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಇನ್ನೂ ನುಡಿದದ್ದೇನಂದರೆ - ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲದೆ ನೋಹನು, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಕಾನಾನನು ಶೇಮನಿಗೆ ಗುಲಾಮನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:26
15 ತಿಳಿವುಗಳ ಹೋಲಿಕೆ  

ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು.


ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು