Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:5
26 ತಿಳಿವುಗಳ ಹೋಲಿಕೆ  

“ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.


ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ, ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರುಗಿ ಬರಮಾಡಿದರು.


ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು.


ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.


“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.


ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.


“ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.


ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.


ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.


ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.


ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ,


ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.


ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.


ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ದೇಶದ ಜನರು ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು