Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:13
27 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


“ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.


ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ!


ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.


ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.


ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.


ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,


ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.


ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,


ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.


ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು