Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:13 - ಕನ್ನಡ ಸಮಕಾಲಿಕ ಅನುವಾದ

13 “ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:13
10 ತಿಳಿವುಗಳ ಹೋಲಿಕೆ  

ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.


ಅವರು ಯೆಹೋವ ದೇವರ ಎದುರಿನಲ್ಲಿ ತಂದ ಅರ್ಪಣೆ ಏನೆಂದರೆ ಆರು ಕಮಾನುಬಂಡಿಗಳು, ಹನ್ನೆರಡು ಎತ್ತುಗಳು, ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯಂತೆ, ಒಬ್ಬೊಬ್ಬನಿಗೆ ಒಂದೊಂದು ಎತ್ತುಗಳನ್ನು ಅವರು ದೇವದರ್ಶನ ಗುಡಾರದ ಮುಂದೆ ತಂದರು.


ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ? ನಿನ್ನ ಕಣದಲ್ಲಿ ಕಾಳು ಕೂಡಿಸುವದೆಂದೂ ಅದನ್ನು ನಿರೀಕ್ಷಿಸುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು