Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:8 - ಕನ್ನಡ ಸಮಕಾಲಿಕ ಅನುವಾದ

8 ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:8
17 ತಿಳಿವುಗಳ ಹೋಲಿಕೆ  

ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.


ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!


“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.


ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


“ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.


ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.


“ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”


ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.


ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು