Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:11 - ಕನ್ನಡ ಸಮಕಾಲಿಕ ಅನುವಾದ

11 “ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:11
24 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.


ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಯೆಹೋವ ದೇವರು ನಿಮ್ಮ ದೇಶದಲ್ಲಿ ಮಳೆಗೆ ಬದಲಾಗಿ ಹುಡಿಯೂ ಧೂಳೂ ಆಗುವಂತೆ ಮಾಡುವರು. ನೀವು ನಾಶವಾಗುವವರೆಗೆ ಅದು ಆಕಾಶದಿಂದ ನಿಮ್ಮ ಮೇಲೆ ಸುರಿಯುವುದು.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.


“ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, ಪುನಃ ಈಜಿಪ್ಟಿಗೆ ಹಿಂದಿರುಗುವರು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು.


ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು