Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:13 - ಕನ್ನಡ ಸಮಕಾಲಿಕ ಅನುವಾದ

13 ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:13
38 ತಿಳಿವುಗಳ ಹೋಲಿಕೆ  

ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.


ಯೆಹೋವ ದೇವರು ತಮ್ಮ ವಾಸಸ್ಥಾನದಿಂದ ಇಳಿದು ಬರುತ್ತಾರೆ. ಅವರು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ಸಂಚರಿಸುತ್ತಾರೆ.


ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು.


ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು. ಅವರೇ ಇಸ್ರಾಯೇಲಿನ ಪರಿಶುದ್ಧರು.


ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ, ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ, ಭೂಮಿಯ ಧೂಳನ್ನು ಅಳತೆಮಾಡಿ ತಿಳಿದುಕೊಂಡವನೂ, ಬೆಟ್ಟಗಳ ಮಟ್ಟವನ್ನೂ, ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನೂ ಯಾರು?


ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.


ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ.


ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ, ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿನಗಳವರೆಗೆ ಘೋರವಾದ ಕತ್ತಲೆ ಕವಿಯಿತು.


ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.


ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.


ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”


ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ; ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.


ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.


ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.


ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?


ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು