Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:3 - ಕನ್ನಡ ಸಮಕಾಲಿಕ ಅನುವಾದ

3 ಗೋಡೆಯಲ್ಲಿಯ ಬಿರುಕುಗಳ ಮೂಲಕ ನೀವು ಹೊರಟು ಹೋಗುವಿರಿ. ನಿಮ್ಮನ್ನು ಹರ್ಮೋನಿನ ಕಡೆಗೆ ಎಸೆಯಲಾಗುತ್ತದೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀವು ಎಲ್ಲರು ಇದ್ದಕ್ಕಿದ್ದಂತೆ ಒಬ್ಬರ ಹಿಂದೆ ಒಬ್ಬರು ಗೋಡೆಯ ಬಿರುಕುಗಳ ಮೂಲಕ ಹೆರ್ಮೋನ್ ಕಡೆಗೆ ತಳ್ಳಲ್ಪಡುವಿರಿ,” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವೆಲ್ಲರು ಇದ್ದ ಮುಖವಾಗಿಯೇ ಕೋಟೆಯೊಡೆದ ಸ್ಥಳಗಳಿಂದ ಹೊರಟು ಹರ್ಮೋನಿಗೆ ಹಾಕಿಸಿಕೊಳ್ಳುವಿರಿ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಪಟ್ಟಣಗಳು ನಾಶವಾಗುವವು. ಗೋಡೆಯಲ್ಲಿರುವ ಬಿರುಕುಗಳ ಮೂಲಕ ಹೆಂಗಸರು ತಪ್ಪಿಸಿಕೊಂಡು ಹೋಗಿ ಹೆಣಗಳ ರಾಶಿಯ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:3
12 ತಿಳಿವುಗಳ ಹೋಲಿಕೆ  

ನೀನು ಅವರ ಕಣ್ಣುಗಳ ಮುಂದೆಯೇ ಗೋಡೆಯನ್ನು ಕೊರೆದು, ಅಲ್ಲಿಂದ ನಿನ್ನ ಸಲಕರಣೆಗಳನ್ನು ಹೊತ್ತುಕೊಂಡು ಹೊರಗೆ ಹೊರಟು ಹೋಗು.


“ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.


ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು, ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಆದ್ದರಿಂದ ಸೆರೆಗೆ ಕರೆದೊಯ್ಯುವವರಲ್ಲಿ ನೀವು ಮೊದಲಿಗರಾಗಿರುವಿರಿ, ಭೋಗ ಮಾಡುವವರ ಹರ್ಷ ಧ್ವನಿಯು ಗತಿಸಿ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು