Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:8 - ಕನ್ನಡ ಸಮಕಾಲಿಕ ಅನುವಾದ

8 ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:8
16 ತಿಳಿವುಗಳ ಹೋಲಿಕೆ  

“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”


ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.


ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.


ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


“ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, ಪುನಃ ಈಜಿಪ್ಟಿಗೆ ಹಿಂದಿರುಗುವರು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು.


ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು