Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:22 - ಕನ್ನಡ ಸಮಕಾಲಿಕ ಅನುವಾದ

22 ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:22
19 ತಿಳಿವುಗಳ ಹೋಲಿಕೆ  

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


“ ‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


“ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.


“ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು