Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:7 - ಕನ್ನಡ ಸಮಕಾಲಿಕ ಅನುವಾದ

7 ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7-9 ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:7
23 ತಿಳಿವುಗಳ ಹೋಲಿಕೆ  

ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”


ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.


“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.


ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.


ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು.


“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.


ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.


ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ.


ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!


ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.


ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು