Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:2 - ಕನ್ನಡ ಸಮಕಾಲಿಕ ಅನುವಾದ

2 ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:2
19 ತಿಳಿವುಗಳ ಹೋಲಿಕೆ  

ನೈಲ್ ನದಿಯ ಬಳಿ ನೆಲೆಯಾಗಿದ್ದ ತೆಬೆಸ್ಸಿಗಿಂತ ನೀನು ಒಳ್ಳೆಯವಳೋ? ಅವಳ ಸುತ್ತಲೂ ನೀರಿತ್ತು. ನದಿ ಅವಳ ರಕ್ಷಣೆ, ನೀರು ಅವಳ ಗೋಡೆ.


ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.


ಬಾಬಿಲೋನಿನ ಜನರು ಸುಕ್ಕೋತ್ ಬೆನೋತ್ ವಿಗ್ರಹವನ್ನು ಮಾಡಿದರು; ಕೂತವಿನ ಜನರು ನೇರ್ಗಲ್ ವಿಗ್ರಹವನ್ನು ಮಾಡಿಕೊಂಡರು; ಹಮಾತಿನ ಜನರು ಅಷೀಮಾವನ್ನು ಮಾಡಿಕೊಂಡರು;


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಅವನು ಇವರ ಸಂಗಡ ಮಾತನಾಡಿಕೊಳ್ಳುತ್ತಾ ಇರುವಾಗ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು, ಮೊದಲಿನ ಹಾಗೆಯೇ ಮಾತನಾಡಿದನು. ಆ ಮಾತುಗಳನ್ನು ದಾವೀದನು ಕೇಳಿದನು.


ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.


ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು