Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:3 - ಕನ್ನಡ ಸಮಕಾಲಿಕ ಅನುವಾದ

3 ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು, ಭಯಂಕರ ಆಳ್ವಿಕೆಯನ್ನು ಹತ್ತಿರ ಮಾಡಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ಆ ಮುಖಂಡರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ, ಅನ್ಯಾಯದ ಪೀಠವನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:3
19 ತಿಳಿವುಗಳ ಹೋಲಿಕೆ  

ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”


“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?


ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.


ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.


‘ನಾನು ಶಾಶ್ವತವಾದ ರಾಣಿ’ ಎಂದು ನೀನು ಅಂದುಕೊಂಡದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ. ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?


ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.


“ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು