Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:1 - ಕನ್ನಡ ಸಮಕಾಲಿಕ ಅನುವಾದ

1 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಆಹಾ, ಯೆಹೋವನು ವಿುಡತೆಗಳನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡತೆಗಳನ್ನು ತಯಾರು ಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:1
14 ತಿಳಿವುಗಳ ಹೋಲಿಕೆ  

ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ಆಗ ಯೆಹೋವ ದೇವರು ನನಗೆ ನಾಲ್ಕು ಕಮ್ಮಾರರನ್ನು ತೋರಿಸಿದರು.


ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.


ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.


ಆಮೇಲೆ ಯೆಹೋವ ದೇವರು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯಲ್ಲಿರುವವರಿಗೆ ಹೇಳಿದೆನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು