Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:12 - ಕನ್ನಡ ಸಮಕಾಲಿಕ ಅನುವಾದ

12 ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅನಂತರ ಅಮಚ್ಯನು ಆಮೋಸನಿಗೆ - ಕಣಿಯವನೇ, ನಡೆ, ಯೆಹೂದದೇಶಕ್ಕೆ ಓಡಿಹೋಗು; ಅಲ್ಲೇ ಪ್ರವಾದನೆಮಾಡುತ್ತಾ ಹೊಟ್ಟೆಹೊರಕೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:12
16 ತಿಳಿವುಗಳ ಹೋಲಿಕೆ  

ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”


ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು