Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:14
17 ತಿಳಿವುಗಳ ಹೋಲಿಕೆ  

ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.


ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು.


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.


ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.


ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.


ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,


ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು.


ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು.


ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು