Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:2 - ಕನ್ನಡ ಸಮಕಾಲಿಕ ಅನುವಾದ

2 ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:2
20 ತಿಳಿವುಗಳ ಹೋಲಿಕೆ  

ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.


ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.


“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”


ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.


ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”


ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?


ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು