Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:9 - ಕನ್ನಡ ಸಮಕಾಲಿಕ ಅನುವಾದ

9 “ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆನ್ನುತ್ತಾನೆ, “ಆ ದಿವಸಗಳಲ್ಲಿ ನಡುಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:9
18 ತಿಳಿವುಗಳ ಹೋಲಿಕೆ  

ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.


ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.


ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.


ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.


ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು