Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:1 - ಕನ್ನಡ ಸಮಕಾಲಿಕ ಅನುವಾದ

1 ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:1
28 ತಿಳಿವುಗಳ ಹೋಲಿಕೆ  

ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.


“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.


ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.


ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು, ಅದರ ಹಾಳುಬಿದ್ದ ಮನೆಯ ಕಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಗಳಿಂದ ಕೇಳಿಬರುವುದು, ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು, ದೇವದಾರು ಮರದ ತೊಲೆಗಳು ಕಳಚಿಬೀಳುವುವು.


ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.


ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.


ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.


ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು.


ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.


ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.


ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.


ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.


“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು