Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:20 - ಕನ್ನಡ ಸಮಕಾಲಿಕ ಅನುವಾದ

20 ಹೊಸ ಹಾಗೂ ಸಜೀವವಾದ ಮಾರ್ಗವಿರುವುದರಿಂದ ಅತಿಪರಿಶುದ್ಧವಾದ ಸ್ಥಳವನ್ನು ಪ್ರವೇಶಿಸಲು ಭರವಸೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆನಿ ಉಗಡಲ್ಲೊ ತೊ ಫಡ್ದೊ ಮಟ್ಲ್ಯಾರ್, ತೆಜೆಚ್ ಸ್ವತಾಚೆ ಆಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:20
20 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.


ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ


ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.


ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.


ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಸೂರ್ಯನು ಕಳೆಗುಂದಿದನು ಮತ್ತು ದೇವಾಲಯದ ತೆರೆಯು ಹರಿದು ಎರಡು ಭಾಗವಾಯಿತು.


ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು.


ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.


ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು