Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:22 - ಕನ್ನಡ ಸಮಕಾಲಿಕ ಅನುವಾದ

22 ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರ್ಯ್ಯಾ ಮನಾನ್ ಅನಿ ಘಟ್ಟ್ ವಿಶ್ವಾಸಾಚ್ಯಾ ಖಾತ್ರಿ ಜೆ ಚುಕಿತ್ ಹೊತ್ತಿ ಭುತ್ತುರ್ಲಿ ಮನಾ ಪವಿತ್ರ್ ಕರುನ್ ಅನಿ ಪವಿತ್ರ್ ಪಾನಿಯಾನ್ ಧುವ್ನ್ ಘೆವ್ನ್ ದೆವಾಚ್ಯಾ ಜಗೊಳ್ ಜಾಂವ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:22
66 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


“ ‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ,


ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.


ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.


ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ, ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.


ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು.


ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು.


ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.


ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು.


ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಕರುಣಿಸಿರಿ.


ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.


ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.


ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು


ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.


ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.


ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು; ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಜೆಬುಲೂನನವರಲ್ಲಿ ದೃಢಹೃದಯದಿಂದ ಸಾಲಾಗಿ ನಡೆಯುವ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರಾದ ಸೈನ್ಯವಾಗಿ ಹೊರಡುವವರು 50,000 ಮಂದಿ.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.


ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು