Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:30 - ಕನ್ನಡ ಸಮಕಾಲಿಕ ಅನುವಾದ

30 ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆನು,” ಎಂದು ಹೇಳಿದ ಕರ್ತದೇವರನ್ನು ನಾವು ಬಲ್ಲೆವು. ಇದಲ್ಲದೆ, “ಕರ್ತದೇವರು ತಮ್ಮ ಜನರಿಗೆ ನ್ಯಾಯತೀರಿಸುವರು,” ಎಂದೂ ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು ಹೇಳಿದಾತನನ್ನು ಬಲ್ಲೆವು; ಇದಲ್ಲದೆ ಕರ್ತನು ತನ್ನ ಜನರ ನ್ಯಾಯವನ್ನು ವಿಚಾರಿಸುವನೆಂತಲೂ ಹೇಳಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಿಯಾ ಶೆಡ್ ಕಾಡುನ್ ಘೆತಾ, ಮಿಯಾಚ್ ಅನಿ ಪರ್ತುನ್ ಘಟ್ಟ್ ಕರಲ್ಲ್ಯಾ ಅಪ್ನಾಕ್ ಪವಿತ್ರ್ ಕರಲೆ ರಗಾತ್ ಚೊಕ್ಕ್ ನ್ಹಯ್ ಮನುನ್ ಯೆವ್ಜುನ್ ದೆವಾಚಿ ಕುರ್ಪಾ ಹೊವ್ನ್ ಹೊತ್ತ್ಯಾ ಆತ್ಮ್ಯಾಕ್ ಕನ್ನಾ ಘಡ್ತಾ ಮನುನ್ ಸಾಂಗಲೆ ಹಾಯ್, ಕೊನ್ ಮಟ್ಲಾ ಮನ್ತಲೆ ಆಮ್ಕಾ ಗೊತ್ತ್ ಹಾಯ್, ಅನಿ ಧನಿ ಅಪ್ನಾಚ್ಯಾ ಲೊಕಾಕ್ನಿ ನ್ಯಾಯ್ ನಿರ್‍ನಯ್ ಕರ್‍ತಾ, ಅಸೆಬಿ ಮನ್ತಲೊ ಕೊನ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:30
18 ತಿಳಿವುಗಳ ಹೋಲಿಕೆ  

ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ತಮ್ಮ ಜನರಿಗೆ ನ್ಯಾಯತೀರಿಸುವುದಕ್ಕೆ ಭೂಮಿ ಆಕಾಶಗಳನ್ನೂ ಹೀಗೆಂದು ಕರೆಯುತ್ತಿದ್ದಾರೆ:


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.


ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.


ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


“ ‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.


ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು