Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:36 - ಕನ್ನಡ ಸಮಕಾಲಿಕ ಅನುವಾದ

36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ದೆವಾಚ್ಯಾ ಮರ್ಜಿ ಸಾರ್ಕೆ ಅನಿಬಿ ಸಂಬಾಳ್ಕಿಚಿ ಗರಜ್ ಹಾಯ್ ತನ್ನಾ ತುಮ್ಕಾ ಗೊಸ್ಟಿಚೊ ಪ್ರತಿಫಳ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:36
39 ತಿಳಿವುಗಳ ಹೋಲಿಕೆ  

ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.


ನೀವು ನಿಮ್ಮ ಸಹನೆಯಿಂದ, ನಿಮ್ಮ ಪ್ರಾಣಗಳನ್ನು ಕಾಪಾಡಿಕೊಳ್ಳುವಿರಿ.


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.


ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.


ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


“ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


“ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.


ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಅವರು ನನ್ನ ಕಡೆಗೆ ತಿರುಗಿ, ನನ್ನ ಮೊರೆಯನ್ನು ಕೇಳಿದರು.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು