Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:25 - ಕನ್ನಡ ಸಮಕಾಲಿಕ ಅನುವಾದ

25 ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಉಲ್ಲೆ ಯೆಳ್ ಪಾಪಾಚ್ಯಾ ಜಗಾತ್ ಸಾವ್ಕಾರ್ಕಿಚೆ ಜಿವನ್ ಕರ್‍ತಲ್ಯಾಚ್ಯಾನ್ಬಿ ದೆವಾಚ್ಯಾ ಲೊಕಾಂಚ್ಯಾ ವಾಂಗ್ಡಾ ತರಾಸ್ ಸೊಸುನ್ ಘೆತಲೆ ಬರೆ ಮನುನ್ ಚಿಂತ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:25
34 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.


ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ಆದರೆ ನೀವು ಬೆಳಕನ್ನು ಹೊಂದಿದ ಮೇಲೆ ಬಾಧೆಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪುಮಾಡಿಕೊಳ್ಳಿರಿ.


ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.


ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.


ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.


ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.


ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು