Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:35 - ಕನ್ನಡ ಸಮಕಾಲಿಕ ಅನುವಾದ

35 ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಬಾಯ್ಕೊ ಮಾನ್ಸಾನಿ ಮರುನ್ ಗೆಲ್ಲ್ಯಾ ಅದ್ಲ್ಯಾ ಲೊಕಾಕ್ನಿ ಪರ್ತುನ್ ಝಿತ್ತೆ ಹೊತಲ್ಯಾ ವೈನಾ ಪರ್ತುನ್ ಘೆಟ್ಲ್ಯಾನಿ, ಥೊಡ್ಯಾ ಲೊಕಾನಿ ಬರೆ ಪರ್ತುನ್ ಝಿತ್ತೆ ಹೊತಲೆ ಗಾವ್ತಾ ಮನುನ್ ಸುಟ್ಕಾ ನಕ್ಕೊ ಮನುನ್ ಮೊಡ್ವುನ್ ಘೆವ್ನ್ ಮರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:35
17 ತಿಳಿವುಗಳ ಹೋಲಿಕೆ  

ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು.


ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.


ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.


ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”


ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.


ಪೌಲನನ್ನು ಪ್ರಶ್ನಿಸಲು ಬಂದವರು ತಕ್ಷಣವೇ ಬಿಟ್ಟುಹೋದರು. ಮಾತ್ರವಲ್ಲದೆ ಪೌಲನು ರೋಮ್ ಪೌರನೆಂದು ಗ್ರಹಿಸಿದ ಅವನನ್ನು ಬೇಡಿಗಳಿಂದ ಬಂಧಿಸಿದ್ದರಿಂದ ಸಹಸ್ರಾಧಿಪತಿಯೂ ಭಯಪಟ್ಟನು.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು