Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:38 - ಕನ್ನಡ ಸಮಕಾಲಿಕ ಅನುವಾದ

38 ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಸ್ಲ್ಯಾಕ್ನಿ ಹ್ಯಾ ಜಗಾತ್‍ ಥವ್ನ್ ಘೆಯ್ನಸಿತ್ ತೆನಿ ತೆಂಚ್ಯಾ ದೆಶಾಚ್ಯಾ ಹಾಳ್ ಡಂಗ್ಳಿತ್, ಮಡ್ಡಿಯಾ ವೈನಿ, ಢೊಂಬಾತ್ನಿ ಅನಿ ಖಡ್ಡ್ಯಾತ್ನಿ ಫಿರುನ್ಗೆತ್ ರಾಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:38
16 ತಿಳಿವುಗಳ ಹೋಲಿಕೆ  

ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.


ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು.


ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?


“ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು.


ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು.


ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು.


ಆಗ ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪಕ್ಷವಾಗಿಯೇ ಹೋರೆಷದ ಗಿರಿಗಳಲ್ಲಿ ಅಂದರೆ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದನಲ್ಲವೇ?


ತನ್ನ ಪ್ರಾಣವನ್ನು ತೆಗೆಯುವುದಕ್ಕೆ ಸೌಲನು ಹೊರಟಿದ್ದಾನೆಂದು ದಾವೀದನು ತಿಳಿದಾಗ, ಅವನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು