Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:4 - ಕನ್ನಡ ಸಮಕಾಲಿಕ ಅನುವಾದ

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ವಿಶ್ವಾಸಾನುಚ್ ಅಬೆಲಾನ್ ಕಾಯಿನಾಚ್ಯಾನ್ ಬಿ ಬರೊ ಬಲಿ ದೆವಾಕ್ ದಿಲ್ಯಾನ್, ತೆಚ್ಯಾ ವೈನಾ ಅಪ್ನಿ ನಿತಿವಂತ್ ಮನುನ್ ಸಾಕ್ಷಿ ಘೆಟ್ಲ್ಯಾನ್. ದೆವಾನ್ ತೆಜಿ ಕಾನಿಕ್ ಒಪ್ಪುನ್ ಘೆಟಲ್ಲೆಚ್ ತಿ ಸಾಕ್ಷಿ ತೊ ಮರುನ್ ಗೆಲ್ಯಾರ್ಬಿ ವಿಶ್ವಾಸಾನ್ ಅಜುನ್‍ಬಿ ಬೊಲುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:4
21 ತಿಳಿವುಗಳ ಹೋಲಿಕೆ  

ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.


ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.


ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.


ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು.


ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ, ಕೇಳುತ್ತಾ, ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.


ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು