Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:15 - ಕನ್ನಡ ಸಮಕಾಲಿಕ ಅನುವಾದ

15 ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಕೊನ್‍ಬಿ ದೆವಾಚಿ ಕುರ್ಪಾ ಕಳ್ದುನ್ ಘೆಯ್‍ ನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ ತುಮ್ಚ್ಯಾತ್ ಕೊಡು ಝಾಡಾ ವಾಡಿನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ, ತೆಚ್ಯಾ ವೈನಾ ಸಗ್ಳೆ ತಾಂಡೊಚ್ ಹಾಳ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:15
41 ತಿಳಿವುಗಳ ಹೋಲಿಕೆ  

ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.


ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.


ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.


ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಒಳಗಾದನು.


ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?


ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.


ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು