Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:22 - ಕನ್ನಡ ಸಮಕಾಲಿಕ ಅನುವಾದ

22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ತುಮಿ ಸಿಯೊನ್ ಮಡ್ದಿಕ್, ಝಿತ್ತೊ ದೆವ್ ರಾತಲ್ಯಾ ಶಾರಾತ್ ಸರ್ಗಾಚ್ಯಾ ಜೆರುಜಲೆಮಾಕ್ ಯೆಲ್ಲ್ಯಾಸಿ, ತುಮಿ ಹಜಾರಾನಿ ಹಜಾರ್ ದೆವ್‍ದುತಾ ಖುಶಿ ಕರ್ತಾಲ್ಯಾ ಜಾಗ್ಯಾರ್ ಯೆಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:22
49 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.


ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.


ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.


ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


“ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.


ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.


ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”


ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,


ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಮತ್ತು, “ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,” ಎಂದು ದೇವರು ಹೇಳುತ್ತಾರೆ.


ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು