Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:27 - ಕನ್ನಡ ಸಮಕಾಲಿಕ ಅನುವಾದ

27 “ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಎಗ್ದಾ ಮಟ್ಲ್ಯಾರ್, ಹ್ಯಾ ಗೊಸ್ಟಿಯಾಂಚೊ ಅರ್ತ್ ಕಾಯ್ ಮಟ್ಲ್ಯಾರ್, ಹಾಲ್ತಲಿ ಜಿನ್ಸಾ ಗಟ್ಟ್ ರಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:27
19 ತಿಳಿವುಗಳ ಹೋಲಿಕೆ  

ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ” ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


“ನಾನು ಹೊಸ ಆಕಾಶವನ್ನೂ, ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ.


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ.


ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.


ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.


ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು