Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:29 - ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಏಕೆಂದರೆ ನಮ್ಮ “ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಅಮ್ಚೊ ದೆವ್ ಎಕ್ ಬಸ್ಮ್ ಕರ್ತಲಿ ಆಗ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:29
20 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ಯೆಹೋವ ದೇವರ ಮಹಿಮೆಯ ದೃಶ್ಯವು ಇಸ್ರಾಯೇಲರ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ದಹಿಸುವ ಅಗ್ನಿಯಂತಿತ್ತು.


“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.


ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.


ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


“ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.


ಮೂಗಿನಿಂದ ಹೊಗೆ ಬಂದಂತೆಯೂ, ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇತ್ತು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಸಮಾಧಾನವುಳ್ಳ ಗೋಮಾಳಗಳು ಯೆಹೋವ ದೇವರ ಕೋಪದ ದೆಸೆಯಿಂದ ಕೆಡವಿಬಿದ್ದವು.


ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು.


ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು