Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:11 - ಕನ್ನಡ ಸಮಕಾಲಿಕ ಅನುವಾದ

11 ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ಆ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾಪಾಚ್ಯಾಸಾಟ್ನಿ ಬಲಿ ಭೆಟ್ವುಕ್ ಮೊಟೊ ಯಾಜಕ್ ಜನಾವರಾಚೆ ರಗಾತ್ ಪವಿತ್ರ್ ಜಾಗ್ಯಾರ್ ಘೆವ್ನ್ ಜಾತಾ, ತೆಂಚಿ ಅಂಗಾ ಶಾರಾತ್ನಿ ಭಾಯ್ರ್ ನ್ಹೆವ್ನ್ ಜಾಳ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:11
13 ತಿಳಿವುಗಳ ಹೋಲಿಕೆ  

ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು.


ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.


ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು.


ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.


ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.


ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.


ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು