Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:21 - ಕನ್ನಡ ಸಮಕಾಲಿಕ ಅನುವಾದ

21 ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಮಿ ತೆಚಿ ಇಚ್ಚ್ಯಾ ಫುರಾ ಕರಿಸಾರ್ಕೆ ಸಗ್ಳ್ಯಾ ಬರ್‍ಯಾ ಕಾಮಾಕ್ನಿ ಪಾಜೆ ಹೊಲ್ಲೊ ಅನ್ಕುಲ್ ತುಮ್ಕಾ ದಿಂವ್ದಿತ್ ಅನಿ ತೊ ಜೆಜುಕ್ರಿಸ್ತಾ ವೈನಾ ಅಪ್ನಾಕ್ ಸಮಾ ಹೊವ್ನ್ ಹೊತ್ತೆ ಅಮ್ಚ್ಯಾಕ್ಡೆ ಕರುಂದಿತ್. ತೆಕಾ ಸದಾಸರ್ವತಾಕ್ ಸ್ತುತಿ ಹೊಂವ್ದಿತ್ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:21
53 ತಿಳಿವುಗಳ ಹೋಲಿಕೆ  

ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.


ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”


ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.


ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


“ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.


“ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು