Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:4 - ಕನ್ನಡ ಸಮಕಾಲಿಕ ಅನುವಾದ

4 ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ಮದ್ದಿ ಲಗ್ನಾಚ್ಯಾ ಜಿವನಾಕ್ ಪಾಜೆ ಹೊಲ್ಲೊ ಮಾನ್ ಗಾವುಂದಿತ್ ಅನಿ ಘೊವ್ ಬಾಯ್ಕೊಚ್ಯಾ ಮದ್ಲೊ ವಿಶ್ವಾಸ್ ಕಪಟ್ ನಸಲ್ಲೊ ಹೊವ್ನ್ ರಾಂವ್ದಿತ್; ಕಶ್ಯಾಕ್ ಮಟ್ಲ್ಯಾರ್, ಪೊಜ್ಡೆಪಾನ್ ಅನಿ ವೆಭಿಚಾರ್ ಕರ್‍ತಲ್ಯಾಂಚಿ ದೆವ್ ಝಡ್ತಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:4
33 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.


ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,


ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.


ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.


ಪೂರ್ಣ ಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.


ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ.


ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.


ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.


ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


“ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.


ಒಬ್ಬ ಮನುಷ್ಯನು ಪರನ ಹೆಂಡತಿಯೊಡನೆ ಮಲಗಿಕೊಂಡವನಾಗಿ ಸಿಕ್ಕಿಬಿದ್ದರೆ, ಆ ಸ್ತ್ರೀಯ ಸಂಗಡ ಮಲಗಿಕೊಂಡ ಮನುಷ್ಯನೂ ಆ ಸ್ತ್ರೀಯೂ ಇಬ್ಬರೂ ಸಾಯಬೇಕು. ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.


ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.


ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು