Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:16 - ಕನ್ನಡ ಸಮಕಾಲಿಕ ಅನುವಾದ

16 “ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಲ್ಲಿ, ದೇವರ ದನಿಯನು ಕೇಳಿಯೂ ದಂಗೆ ಎದ್ದವರು ಯಾರು? ಮೋಶೆಯ ಮುಂದಾಳತ್ವದಲ್ಲಿ ಈಜಿಪ್ಟ್ ದೇಶವನ್ನು ಬಿಟ್ಟುಬಂದ ಎಲ್ಲರೂ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಂಬದರಲ್ಲಿ ಕೇಳಿ ಕೋಪವನ್ನೆಬ್ಬಿಸಿದವರು ಯಾರು? ಮೋಶೆಯ ಕೈಕೆಳಗಿದ್ದು ಐಗುಪ್ತದೊಳಗಿಂದ ಹೊರಟುಬಂದವರೆಲ್ಲರೂ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ರಾತಾನಾ ದೆವಾಚೊ ಧನ್ ಆಯ್ಕುನ್‍ಬಿ ತೆಚ್ಯಾ ವಿರೊದ್ ಜಾತಲೆ ಕೊನ್ ತೆ? ಮೊಯ್ಜೆ ಮುಖಂಡ್ ಹೊವ್ನ್ ಇಜಿಪ್ತ್ ಮನ್ತಲ್ಯಾ ದೆಶಾತ್ನಾ ಭಾಯ್ರ್ ಯೆಲ್ಲಿ ತಿ ಸಗ್ಳಿ ಲೊಕಾಚ್ ನ್ಹಯ್ ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:16
18 ತಿಳಿವುಗಳ ಹೋಲಿಕೆ  

ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.


ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.


ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು.


ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.


ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ,” ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು