Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:7 - ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾಸಾಟಿಚ್ ಪವಿತ್ರ್ ಆತ್ಮೊ ಮನ್ತಾ: “ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಜಾಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:7
27 ತಿಳಿವುಗಳ ಹೋಲಿಕೆ  

ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


“ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ; ಇಸ್ರಾಯೇಲು ನನಗೆ ಅಧೀನವಾಗಲಿಲ್ಲ.


ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ


“ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,


ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.


ಪವಿತ್ರಾತ್ಮ ದೇವರು ಸಹ ನಿಮಗೆ ಸಾಕ್ಷಿ ಕೊಡುವವರಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು