Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:1 - ಕನ್ನಡ ಸಮಕಾಲಿಕ ಅನುವಾದ

1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತೆಚೆಸಾಟ್ನಿ ದೆವಾಚ್ಯಾ ತ್ಯಾ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸ್ತಾಂವ್ ಮನುನ್ ದೆವಾನ್ ದಿಲ್ಲಿಚಿ ಗೊಸ್ಟ್ ಅಜುನ್‍ಬಿ ಝಿತ್ತಿ ಹಾಯ್ ತಸೆ ಮನುನ್ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸುಕ್ ತುಮ್ಚ್ಯಾತ್ಲ್ಯಾ ಕೊನಾಕ್ಬಿ ನಕ್ಕೊ ಮನ್ತಲೊ ನಿರ್‍ನಯ್ ಗಾವಿಲ್ ಮನ್ತಲ್ಯಾ ಭಿಂಯಾನ್ ಅಮಿ ಹುಶಾರ್ಕಿಕ್ ರಾಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:1
28 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.


ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು